Monday 27 March 2017

ಯುಗಾದಿ ಹಬ್ಬದ ಶುಭಾಶಯಗಳು

ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು. 

ಈ ಹೊಸ ವರ್ಷದಲ್ಲಿ ನಮ್ಮೆಲ್ಲರ ಇಷ್ಟಾರ್ಥಗಳು ಈಡೇರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ.
























ಬೇವು - ಬೆಲ್ಲದ ಮಿಶ್ರಣವನ್ನು ತಿನ್ನುವಾಗ ಹೇಳುವ ಒಂದು ಶ್ಲೋಕ ಹೀಗಿದೆ:
ಶತಾಯು: ವಜ್ರದೇಹಾಯ ಸರ್ವಸಂಪತ್ಕರಾಯಚ|ಸರ್ವಾರಿಷ್ಟ ವಿನಾಶಾಯ ನಿಂಬಕಂದಳ ಭಕ್ಷಣಂ||


ಅದರರ್ಥ ಹೀಗಿದೆ - ನೂರು ವರುಷಗಳ ಆಯುಷ್ಯ, ಸದೃಢ ಆರೋಗ್ಯ, ಸಕಲ ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲ ಅರಿಷ್ಟ ನಿವಾರಣೆಗಾಗಿಯೂ ಬೇವು ಬೆಲ್ಲ ಸೇವನೆ ಮಾಡುತ್ತೇನೆ.

ಯುಗಾದಿ ಅಂದರೆ....
ಚಿಗುರಿನ ಪಲ್ಲವಿ
ನೆನಪಿನ ಚರಣ
ಹೊಸ ಠರಾವು
ಹಳೆಯ ಬೇಸರಕ್ಕೆ ವಿಚ್ಛೇದನ
ತೊಳೆದ ಮನೆ
ಬೆಳಗುವ ಮನಸ್ಸು
ಹೊಸ ಬಟ್ಟೆ
ಒಬ್ಬಟ್ಟಿನ ತಟ್ಟೆ
ಸಂಕಲ್ಪಗಳ ತೇರು
ಭಾವ ಪುನರುತ್ಥಾನ
ಪ್ರಕೃತಿಯ ಪರಿಭ್ರಮಣೆ
 ತನ್ನಿಂದ ತಾನೆ ನಡೆಯುವ ಒಂದು ಮಾಯೆ
ಹಳೇ ಮಾತಿಗೆ ಹೊಸ ಮೌನ
ಇತಿಹಾಸದ ಅಟ್ಟಹಾಸಕ್ಕೆ ಹೊಸ ಮಂದಹಾಸ
ತಾಳ್ಮೆಯ ತಳಿರು
ಅರಿವಿನ ಹೂರಣ
ತಿಳಿವಿನ ರಂಗೋಲಿ
ಬದುಕಿನ ಆರಂಭ
ನಂದನದ ಜೊತೆಗಾತಿ
ಸಂಭ್ರಮದ ದಿಬ್ಬಣ
ನವೋಲ್ಲಾಸಕ್ಕೆ ನಾಂದಿ
ಕಾಲಕ್ಕೆ ಕನ್ನಡಿ
ನವಯುಗದ ಮುನ್ನುಡಿ
ಭರವಸೆ ನೀಡುವ ಅಭಯ
ಹಸ್ತ ಜೀವಂತಿಕೆಯ ಪರಮಾವಧಿ
ಕನಸುಗಳ ಆದಿ
ಪರಿಸರದಲ್ಲೆಲ್ಲ ಪ್ರಸನ್ನತೆಯನ್ನು ಪ್ರಚೋದಿಸುವ ಪರ್ವಕಾಲ
ಅದಮ್ಯ ಚೇತನದ ಸಂಕೇತ
ಪಂಚಾಂಗ ಶ್ರವಣ
ನೂತನ ವಸ್ತ್ರಧಾರಣ
ಹೋಳಿಗೆ ಪಾಯಸ ಭೋಜನ
ಬೇವು-ಬೆಲ್ಲ ಸೇವನ
ಶುಭಾಶಂಸನ
ವಸಂತನ ಆಗಮನ
ಚೈತನ್ಯದ ಆಗರ
ನೋವು ನಲಿವಿನ ಸಂಭ್ರಮ
ಜೀವಸಂಕುಲದ ಸಂತಸ
ಚಿಗುರೆಲೆಗಳ ಸೊಗಡು
ಹೂದುಂಬಿಯ ರಸದೌತಣ
ಮತ್ತೊಂದು ಸಂವತ್ಸರಕ್ಕೆ ಸ್ವಾಗತ ಬೀಳ್ಕೊಂಡ ವರ್ಷದ ಸಿಂಹಾವಲೋಕನ
ಸೂರ್ಯೋದಯದ ಹರ್ಷೋದಯ!


.ರಾ.ಬೇಂದ್ರೆಯವರ ಯುಗಾದಿ ಕವಿತೆ:
ವರಕವಿ .ರಾ.ಬೇಂದ್ರೆಯವರ ಯುಗಾದಿ ಬಗೆಗಿನ ಕವಿತೆ ಸುಪ್ರಸಿದ್ಧವಾದುದು.

"ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತ್ತಿದೆ
ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ
ಹೊಂಗೆ ಹೂವ ತೊಂಗಲಲಿ ಭೃಂಗದ ಸಂಗೀತ ಕೇಳಿ ಮತ್ತೆ ಕೇಳಿ ಬರುತ್ತಿದೆ
ಬೇವಿನ ಕಹಿ ಬಾಳಿನಲ್ಲಿ ಹೂವಿನ ನಸುಗಂಪು ಸೂಸಿ ಜೀವ ಕಳೆಯ ತರುತಿದೆ
ವರುಷಕೊಂದು ಹೊಸತು ಜನ್ಮ ವರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ
ಒಂದೆ ಒಂದು ಜನ್ಮದಲ್ಲಿ ಒಂದೆ ಬಾಲ್ಯ ಒಂದೆ ಹರಯ ನಮಗದಷ್ಟೆ ಏತಕೋ

ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ ನವೀನ ಜನನ ನಮಗೆ ಏಕೆ ಬಾರದೋ"||ಯುಗ ಯುಗಾದಿ ಕಳೆದರು||

kavana Krupe: Online India: ಗುರುರಾಜ ಪೋಶೆಟ್ಟಿಹಳ್ಳಿ

ವಚನಗಳು 1

ವಚನಗಳು 1
ಗುರುವಿನಾ ವಿಸ್ತರದ, ಪರಿಯನಾನೇನೆಂಬೆ
ಮೆರೆವ ಬ್ರಹ್ಮಾಂಡದೊಳಹೊರಗೆ
ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ

ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು
ಪರದೇಶಿಯಂತೆ ಇರುತಿರ್ಪಯೋಗಿಯನು
ಪರಮಗುರುವೆಂಬೆ ಸರ್ವಜ್ಞ

ಸರ್ವಜ್ಞನೆಂಬುವನು ಗರ್ವದಿಂದಾದವನೆ ?
ಸರ್ವರೊಳಗೊಂದು ನುಡಿಗಲಿತು ವಿದ್ಯೆಯ
ಪರ್ವತವೇ ಆದ ಸರ್ವಜ್ಞ 

ನಾಳೆ ಬರುವುದು ನಮಗಿಂದೇ ಬರಲಿ
ಇಂದು ಬರುವುದು ನಮಗೀಗಲೇ ಬರಲಿ
ಆಗೀಗ ಎನ್ನದಿರು ಚೆನ್ನಮಲ್ಲಿಕಾರ್ಜುನ

ಎಮ್ಮೆಗೊಂದು ಚಿಂತೆ! ಸಮ್ಮಗಾರನಿಗೊಂದು ಚಿಂತೆ!
ನನಗೆ ನನ್ನ ಚಿಂತೆ! ತನಗೆ ತನ್ನ ಕಾಮದ ಚಿಂತೆ!
ಒಲ್ಲೆ ಹೋಗು, ಸೆರಗ ಬಿಡು ಮರುಳೆ!
ನನಗೆ ಚೆನ್ನಮಲ್ಲಿಕಾಜುನದೇವರು
ಒಲಿವನೋ ಒಲಿಯನೋ ಎಂಬ ಚಿಂತೆ!

ಒಬ್ಬಂಗೆ ಇಹವುಂಟು, ಒಬ್ಬಂಗೆ ಪರವುಂಟು
ಒಬ್ಬಂಗೆ ಇಹಪರವೆರಡೂ ಇಲ್ಲ
ಚೆನ್ನಮಲ್ಲಿಕಾರ್ಜುನದೇವರ ಶರಣರಿಗೆ
ಇಹಪರವೆರಡೂ ಉಂಟು

ಎಲ್ಲ ಎಲ್ಲವನರಿದು ಫಲವೇನು
ಮತ್ತೆ ಎಲ್ಲ ಎಲ್ಲವನರಿದು ಫಲವೇನು?
ತನ್ನ ತಾನರಿಯದನ್ನಕ್ಕ?
ತನ್ನರಿವು ಕರಿಗೊಂಡ ಬಳಿಕ ಇದಿರಿಟ್ಟು ಕೇಳಲುಂಟ?
ನಿಮ್ಮರಿವು ತಲೆದೋರಿದ ಕಾರಣ
ನನ್ನ ನಾನರಿದೆ ಚೆನ್ನಮಲ್ಲಿಕಾರ್ಜುನ

ತನು ಶುದ್ಧ, ಮನ ಶುದ್ಧ,
ಭಾವಶುದ್ಧವಾದವರನೆನಗೊಮ್ಮೆ ತೋರಾ!
ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ,
ನಿತ್ಯಶುದ್ಧರಾದವರನೆನಗೊಮ್ಮೆ ತೋರಾ!
ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ
ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ

ಮಾಡುವಾತ ನಾನಲ್ಲಯ್ಯ,
ನೀಡುವಾತ ನಾನಲ್ಲಯ್ಯ,
ಬೇಡುವಾತ ನಾನಲ್ಲಯ್ಯ,
ನಿಮ್ಮ ಕಾರುಣ್ಯವಲ್ಲದೆ, ಎಲೆ ದೇವಾ!
ಮನೆಯ ತೊತ್ತಲಸಿದರೆ ಒಡತಿ ಮಾಡಿಕೊಂಬಂತೆ
ನಿನಗೆ ನೀ ಮಾಡಿಕೋ ಕೂಡಲಸಂಗಮದೇವಾ!

ಅಹಂಕಾರ ಮನವನಿಂಬುಗೊಂಡಲ್ಲಿ
ಲಿಂಗ ತಾನೆಲ್ಲಿಪ್ಪುದೋ ?
ಅಹಂಕಾರಕ್ಕೆ ಎಡೆಗುಡದೆ
ಲಿಂಗತನುವಾಗಿರಬೇಕು!
ಅಹಂಕಾರರಹಿತನಾದಲ್ಲಿ
ಸನ್ನಿಹಿತ ಕಾಣಾ ಕೂಡಲಸಂಗಮದೇವ.

ನುಡಿದರೆ ಮುತ್ತಿನ ಹಾರದಂತಿರಬೇಕು!
ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು!
ನುಡಿದರೆ ಸ್ಫಟಿಕದ ಶಲಾಕೆಯಂತಿರಬೇಕು!
ನುಡಿದರೆ ಲಿಂಗ ಮೆಚ್ಚಿ ಅಹುದೆನಬೇಕು ?
ನುಡಿಯೊಳಗಾಗಿ ನಡೆಯದಿದ್ದರೆ
ಕೂಡಲಸಂಗಮದೇವನೆಂತೊಲಿವನಯ್ಯ ?


ಮುಂದುವರಿಯುವುದು...

ಪುರಾತನದಿಂದ ವರ್ತಮಾನದವರೆಗೂ ಗಮನ ಸೆಳೆದಿರುವ ಚಾತಕ ಪಕ್ಷಿ - Jacobin Cuckoo!!

ಏನೆಂದು ಬಣ್ಣಿಸಲಿ ನಿನ್ನ ಮಹಿಮೆಯ ಓ ಚಾತಕ ಪಕ್ಷಿಯೇ!? ಪುರಾಣದಲಿ ಜಾನಪದದಲಿ ಕಾಳಿದಾಸ ತುಳಸೀದಾಸ ಕುವೆಂಪುರಾದಿಯಾಗಿ ಕವಿವರ್ಯರ ವಿರಹ ಕಾವ್ಯ ಸಾಲುಗಳಲಿ ಮೆರೆಯುತಿರುವ ಉಪ...